Mangal Aarthi Tandu belagire lyrics

ಮಂಗಳಾರತಿ ತಂದು ಬೆಳಗಿರೆ
ಅಂಬುಜಾಸನ ರಾಣಿಗೆ
ಅಂಬೆಗೆ ಜಗದಾಂಬೆಗೆ ಮೂಕಾಂಬೆಗೆ ಶಶಿ ಬಿಂಬೆಗೆ ||
ಶುದ್ಧ ಸ್ನಾನವ ಮಾಡಿ ನದಿಯಲಿ
ವಜ್ರಪೀಠದಿ ನೆಲೆಸಿರೆ


ತಿದ್ದಿ ತಿಲಕವ ತೀಡಿದಂಥ
ಮುದ್ದು ಮಂಗಳ ಗೌರಿಗೆ || ೧ ||
ಎರೆದು ಪೀತಾಂಬರವನುಡಿಸಿ
ಸರ್ವಾಭರಣವ ರಚಿಸಿದ
ಹರಳಿನೋಲೆ ವಜ್ರಮೂಗುತಿ
ವರಮಹಾಲಕ್ಷ್ಮಿ ದೇವಿಗೆ || ೨ ||
ನಿಗಮ ವೇದ್ಯಳೆ ನಿನ್ನ ಗುಣಗಳ
ಬಗೆಬಗೆಯಲಿ ವರ್ಣಿಪೆ
ತೆಗೆದು ಭಾಗ್ಯವ ನೀಡು ಏನುತ
ಜಗದೊಡೆಯನ ರಾಣಿಗೆ ||೩||
ಹುಟ್ಟುಬಡವೆಯ ಕಷ್ಟಕಳೆದು
ಕೊಟ್ಟಳರಸನ ಸಿರಿಯನು
ಹೆತ್ತ ಕುಮರನ ತೋರಿದಂಥ
ಶುಕ್ರವಾರದ ಲಕ್ಷ್ಮಿಗೆ ||೪||

Comments

Popular posts from this blog

Hanumane Tandeyu Hanumane Thayiyu lyrics

Sankshipta Guru Charitre in kannada

Sri Rama Chandirane